ಅಪಘಾತದಲ್ಲಿ ಗಾಯಗೊಂಡಿದ್ದ ನಾಗರಕೊಡಿಗೆ ಮಹೇಶ್ ಗೌಡ ನಿಧನ

ಅಪಘಾತದಲ್ಲಿ ಗಾಯಗೊಂಡಿದ್ದ ನಾಗರಕೊಡಿಗೆ ಮಹೇಶ್ ಗೌಡ ನಿಧನ ಹೊಸನಗರ ತಾಲೂಕಿನ ತ್ರಿಣಿವೆ ಗ್ರಾಮ ಪಂಚಾಯತಿಯ ಗೊರಗೋಡಿನ ದಿ. ಗಂಗಾಧರಪ್ಪ ಗೌಡರ ಪುತ್ರ ಮಹೇಶಗೌಡ (56) ಬುಧವಾರ ಸಂಜೆ ಕಾರ್ಗಡಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಅಡಿಕೆ ಕೊಯ್ಲು ಕತ್ತಿ ರಿಪೇರಿ ಮಾಡಿಸಿ ಮನೆಗೆ ಹಿಂದಿರುಗುತಿದ್ದಾಗ ಕಾರಣಗಿರಿ ಬಳಿಯಲ್ಲಿ ಏಕಾಏಕಿ ಜಾನುವಾರುಗಳು ಅಡ್ಡ ಬಂದು ಅವರ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡಿದ್ದ ಮಹೇಶಗೌಡರನ್ನು ಹೊಸನಗರದಲ್ಲಿ ಚಿಕಿತ್ಸೆಗೆ ಕೊಡಿಸಿ ಹೆಚ್ಚಿನ…

Read More

ಹೊಸನಗರ : ಕಚೇರಿಯಲ್ಲಿ ಲಂಚ ಪಡೆಯುತಿದ್ದ ನ್ಯಾಯಲಯದ ಎಪಿಪಿ ಲೋಕಾಯುಕ್ತ  ಬಲೆಗೆ

ಹೊಸನಗರ : ಕಚೇರಿಯಲ್ಲಿ ಲಂಚ ಪಡೆಯುತಿದ್ದ ನ್ಯಾಯಲಯದ ಎಪಿಪಿ ಲೋಕಾಯುಕ್ತ  ಬಲೆಗೆ ರಿಪ್ಪನ್‌ಪೇಟೆ :  ರಬ್ಬರ್ ಮರ ಲೀಜ್ ವಿಚಾರವಾಗಿ ಇದ್ದ ಜಗಳದ ಕೇಸನ್ನು  ರಾಜಿ ಮೂಲಕ ಬೇಗ ಮುಗಿಸಿಕೊಡುತ್ತೇನೆ ಎಂದು ಹೇಳಿ ಪಿರ್ಯಾದಿಯಿಂದ ಲಂಚ ಪಡೆಯುತ್ತಿದ್ದ  ಹೊಸನಗರ ನ್ಯಾಯಾಲಯದ ಸಹಾಯಕ  ಸರ್ಕಾರಿ ಅಭಿಯೋಜಕ ರವಿ ಎನ್ನುವವರನ್ನು ಲೋಕಾಯುಕ್ತ  ಪೊಲೀಸರು ಶುಕ್ರವರ ಸಂಜೆ ನ್ಯಾಯಾಲಯದ ಆವರಣದಲ್ಲೇ ಬಂಧಿಸಿದ್ದಾರೆ. ರಿಪ್ಪನ್‌ಪೇಟೆಯ ಕೆರೆಹಳ್ಳಿ ಗ್ರಾಮದ ಅಂಜನ್‌ಕುಮಾರ್ ರವರ ಅವರ  ಕೇಸ್ ಮುಗಿಸಿಕೊಡಬೇಕಾದರೆ 5,೦೦೦ ರೂ ಕೊಡಬೇಕು ಎಂದು ಹೇಳಿ, ಪಿರ್ಯಾದುದಾರರ…

Read More

ಶತಾಯುಷಿ ಮೀನಜ್ಜ ಅಪಘಾತದಲ್ಲಿ ಸಾವು – ಹಿಟ್ ಅಂಡ್ ರನ್ ಗೆ ಬಲಿಯಾದ ಸ್ವಾವಲಂಬಿ ಶತಾಯುಷಿ

ಶತಾಯುಷಿ ಮೀನಜ್ಜ ಅಪಘಾತದಲ್ಲಿ ಸಾವು – ಹಿಟ್ ಅಂಡ್ ರನ್ ಗೆ ಬಲಿಯಾದ ಸ್ವಾವಲಂಬಿ ಶತಾಯುಷಿ ಹುಲಿಕಲ್ ನಿವಾಸಿ 102 ವರ್ಷದ ಮೀನಜ್ಜ ಅಲಿಯಾಸ್ ಕೃಷ್ಣ ದೇವರು ಎಂಬುವವರು ಭಾನುವಾರ (ನ.10) ರಸ್ತೆ ಅಪಘಾತಕ್ಕೆ ಮರಣಹೊಂದಿದ ಘಟನೆ ನಡೆದಿದೆ. ರಾತ್ರಿ 8 ರಿಂದ 8.30ರ ಸುಮಾರಿಗೆ ರಸ್ತೆ ಬದಿಯಲ್ಲಿ ಸಾಗುತ್ತಿದ್ದ ವೇಳೆ ಕಾರು ಮತ್ತು ಟ್ಯಾಂಕರ್ ಓವರ್ ಟೇಕ್ ಮಾಡುವ ಭರದಲ್ಲಿ ಮೀನಜ್ಜನಿಗೆ ಡಿಕ್ಕಿ ಹೊಡೆದ ಪರಿಣಾಮ ಮೀನಜ್ಜ ತೀವ್ರ ಗಾಯಗೊಂಡಿದ್ದು ನಗರ ಆಸ್ಪತ್ರೆಗೆ ಕರೆತರುವ ಮುನ್ನವೇ…

Read More

40 ಕೆಜಿ ಮಾಂಸ ಸಮೇತ ಕಾಡು ಹಂದಿ ಬೇಟೆಗಾರರ ಬಂಧನ

40 ಕೆಜಿ ಮಾಂಸ ಸಮೇತ ಕಾಡು ಹಂದಿ ಬೇಟೆಗಾರರ ಬಂಧನ 40 ಕೆ.ಜಿ. ಮಾಂಸ ಸಹಿತ ಕಾಡುಹಂದಿ ಬೇಟೆಗಾರರನ್ನು ಬಂಧಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹರತಾಳು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆ ಹುಣಸವಳ್ಳಿ ಗ್ರಾಮದಲ್ಲಿ ನಡೆದಿದೆ. ಕಾಡುಹಂದಿಯನ್ನು ಬೇಟೆಯಾಡಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯಾಧಿಕಾರಿಗಳು ಮೂವರ ವಿರುದ್ಧ ಪ್ರಕರಣ ದಾಖಲಿಸಿ ಓರ್ವನನ್ನು ಬಂಧಿಸಿದ್ದಾರೆ. ಕೆ ಹುಣಸವಳ್ಳಿ ಗ್ರಾಮದ ಡಾಕಪ್ಪ ಬಿನ್ ಮಂಜಪ್ಪ, ಕಾರ್ತಿಕ್ ಬಿನ್ ಡಾಕಪ್ಪ ಹಾಗೂ ಗಣೇಶ ಬಿನ್…

Read More

HOSANAGARA | ಹಾಡುಹಗಲೇ ಮನೆ ಕಳ್ಳತನ – ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳವು.!

HOSANAGARA | ಹಾಡುಹಗಲೇ ಮನೆ ಕಳ್ಳತನ – ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳವು.! ಹೊಸನಗರ : ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಮನೆಯಲ್ಲಿ ಹಾಡುಹಗಲೇ ಮನೆ ಕಳ್ಳತನವಾಗಿರುವ ಘಟನೆ ಮಾರುತಿಪುರದಲ್ಲಿ ನಡೆದಿದೆ. ಮಾರುತಿಪುರ ಗ್ರಾಮದ ಸುಧೀಂದ್ರ ಹೊಳ್ಳ ಎಂಬುವವರ ಮನೆಯಲ್ಲಿ ಮಧ್ಯಾಹ್ನದ ವೇಳೆ ಮನೆ ಕಳ್ಳತನವಾಗಿದ್ದು ಲಕ್ಷಾಂತರ ರೂಪಾಯಿಗಳ ಚಿನ್ನ ಕಳುವಾಗಿದೆ ಎನ್ನಲಾಗುತ್ತಿದೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಮುಂಭಾಗದ ಬಾಗಿಲಿನ ಬೀಗ ಮುರಿದು ಕಳ್ಳತನವೆಸಗಲಾಗಿದೆ ಎನ್ನಲಾಗುತಿದ್ದು ಸತ್ಯಾಸತ್ಯತೆ ಪೊಲೀಸ್ ತನಿಖೆಯಲ್ಲಿ ತಿಳಿದುಬರಬೇಕಾಗಿದೆ. ಘಟನಾ ಸ್ಥಳಕ್ಕೆ ಶ್ವಾನದಳ,ಪೋಲಿಸರು ಮತ್ತು…

Read More

ಒಂದೇ ಕುಟುಂಬದ ಮೇಲೆ ಎರೆಡೆರಡು ಬಾರಿ ಹೆಜ್ಜೇನು ದಾಳಿ – ಏಳು ಮಂದಿಗೆ ಗಾಯ , ಓರ್ವನ ಸ್ಥಿತಿ ಗಂಭೀರ

ಒಂದೇ ಕುಟುಂಬದ ಮೇಲೆ ಎರೆಡೆರಡು ಬಾರಿ ಹೆಜ್ಜೇನು ದಾಳಿ – ಏಳು ಮಂದಿಗೆ ಗಾಯ , ಓರ್ವನ ಸ್ಥಿತಿ ಗಂಭೀರ ಹೊಸನಗರ : ಒಂದೇ ಕುಟುಂಬದ ಮೇಲೆ ಎರಡೆರಡು ಬಾರಿ ಹೆಜ್ಜೇನು ದಾಳಿಯಾಗಿ 7 ಮಂದಿ ಗಾಯಗೊಂಡು ಓರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಹೊಸನಗರ ತಾಲೂಕಿನ ಚಿಕ್ಕಪೇಟೆ ನಗರದಲ್ಲಿ ಶನಿವಾರ ನಡೆದಿದೆ. ಶನಿವಾರ ಬೆಳಗ್ಗೆ ಚಿಕ್ಕಪೇಟೆ ಸೇತುವೆ ಬಳಿಯ ಬಾಷಾ ಎಂಬುವವರ ಮನೆ ಸಮೀಪ ಬಾಷಾ, ಅವರ ಪತ್ನಿ ಆಸ್ಮಾ, ಇಬ್ಬರು ಮಕ್ಕಳಾದ ಆರೀಫ್ ಮತ್ತು ಅನೀಫ್…

Read More

ಹೊಸನಗರದಲ್ಲಿ ಜೆಡಿಎಸ್ ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಹೊಸನಗರದಲ್ಲಿ ಜೆಡಿಎಸ್ ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ಹೊಸನಗರ: ಅತಿ ಶೀಘ್ರದಲ್ಲೇ ಪಂಚಾಯತಿ ಚುನಾವಣೆಗಳು ಘೋಷಣೆಯಾಗುವ ಕಾಲ ಸನ್ನಿಹಿತವಾದ ಹಿನ್ನಲೆಯಲ್ಲಿ ಜೆಡಿಎಸ್ ಪಕ್ಷ ಸಂಘಟನೆಗೆ ರಾಜ್ಯಾಧ್ಯಕ್ಷ , ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲು ಕರೆ ನೀಡಿದ್ದು ಆ ಮೂಲಕ ರಾಜ್ಯಾದ್ಯಂತ ಸಂಘಟನೆಗೆ ಪಕ್ಷ ಮುಂದಾಗಿದ್ದೆ ಎಂದು ಜೆಡಿಎಸ್ ಪಕ್ಷದ ಜಿಲ್ಲಾ ಕಾರ್ಯಾಧ್ಯಕ್ಷ ರಾಮಕೃಷ್ಣ ತಿಳಿಸಿದರು. ಬುಧವಾರ ಪಟ್ಟಣದ ಶೀತಲ್ ಹೋಟಲ್ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಪಕ್ಷದ ನೂತನ ಕಾರ್ಯಕರ್ತರ ಸದಸ್ಯತ್ವ…

Read More

ಭಾರಿ ಮಳೆಗೆ ಸೂಡೂರು ಬಳಿಯಲ್ಲಿ ಕೊಚ್ಚಿಹೋದ ರೈಲ್ವೆ ಟ್ರ್ಯಾಕ್ ನ ಜಲ್ಲಿ – ರೈಲು ಸಂಚಾರ ವ್ಯತ್ಯಯ

ಭಾರಿ ಮಳೆಗೆ ಸೂಡೂರು ಬಳಿಯಲ್ಲಿ ಕೊಚ್ಚಿಹೋದ ರೈಲ್ವೆ ಟ್ರ್ಯಾಕ್ ನ ಜಲ್ಲಿ – ರೈಲು ಸಂಚಾರ ವ್ಯತ್ಯಯ ರಿಪ್ಪನ್‌ಪೇಟೆ : ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಸೂಡೂರು ಬಳಿಯಲ್ಲಿ ರೈಲ್ವೆ ಹಳಿಯಡಿಯಲ್ಲಿ ಹಾಕಿದ್ದ ಜಲ್ಲಿಕಲ್ಲುಗಳು ಪೂರ್ತಿಯಾಗಿ ಕೊಚ್ಚಿಕೊಂಡು ಹೋಗಿ ರೈಲ್ವೆ ಸಂಚಾರಕ್ಕೆ ವ್ಯತ್ಯಯವುಂಟಾಗಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲಾದ್ಯಂತ ಮಂಗಳವಾರ ಸುರಿದ ಭಾರಿ ಮಳೆಗೆ ರೈಲು ಹಳಿಗಳ ಅಡಿಯಿರುವ ಜಲ್ಲಿ ಸಂಪೂರ್ಣ ಕೊಚ್ಚಿ ಹೋಗಿ, ತಾಳಗುಪ್ಪ-ಬೆಂಗಳೂರು, ತಾಳಗುಪ್ಪ-ಮೈಸೂರು ಟ್ರೈನ್‌ ಸಂಚಾರಕ್ಕೆ ಅಡ್ಡಿಯಾಗಿರುವ ಘಟನೆ ನಡೆದಿದೆ. ಕಳೆದ…

Read More

RIPPONPETE | ಭಾರಿ ಮಳೆಗೆ ಮನೆ ಮೇಲೆ ಬಿದ್ದ ಮರ – ಸ್ಥಳಕ್ಕೆ ತಹಶೀಲ್ದಾರ್ ಭೇಟಿ

RIPPONPETE | ಭಾರಿ ಮಳೆಗೆ ಮನೆ ಮೇಲೆ ಬಿದ್ದ ಮರ – ಸ್ಥಳಕ್ಕೆ ತಹಶೀಲ್ದಾರ್ ಭೇಟಿ ಶಿವಮೊಗ್ಗ ಜಿಲ್ಲಾದ್ಯಂತ ಭಾರಿ ಮಳೆ ಸುರಿಯುತಿದ್ದು ಕೆಲವೆಡೆ ಅನಾಹುತಗಳು ಸಂಭವಿಸಿವೆ.ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯ ಮುತ್ತಲ ಗ್ರಾಮದ ಮನೆಯೊಣ್ದರ ಮೇಲೆ ಬೃಹತ್ ಮರ ಬಿದ್ದು ಭಾರಿ ಹಾನಿಯಾಗಿದೆ.ಈ ಹಿನ್ನಲೆಯಲ್ಲಿ ಸ್ಥಳಕ್ಕೆ ತಹಶೀಲ್ದಾರ್ ರಶ್ಮಿ ಹಾಲೇಶ್ , ಶಾಸಕ ಬೇಳೂರು ಗೋಪಾಲಕೃಷ್ಣ ರವರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಚಿಕ್ಕಜೇನಿ ಗ್ರಾಮ ಪಂಚಾಯಿತಿ ಮುತ್ತಲ ಗ್ರಾಮದ…

Read More

HOSANAGARA | ಹಸುವಿನ ಕುತ್ತಿಗೆಗೆ ಹಗ್ಗ ಬಿಗಿದು ಬಾವಿಗೆ ಎಸೆದು ಸಾಯಿಸಿದ ಕಿಡಿಗೇಡಿಗಳು

HOSANAGARA | ಹಸುವಿನ ಕುತ್ತಿಗೆಗೆ ಹಗ್ಗ ಬಿಗಿದು ಬಾವಿಗೆ ಎಸೆದು ಸಾಯಿಸಿದ ಕಿಡಿಗೇಡಿಗಳು ಹೊಸನಗರ ಪಟ್ಟಣದ ಹೊರ ವಲಯದ ಕುವೆಂಪು ಶಾಲೆಯ ಹತ್ತಿರ ನೇಣು ಬಿಗಿದ ಸ್ಥಿತಿಯಲ್ಲಿ ಹಸುವಿನ ಶವವೊಂದು ಪತ್ತೆಯಾದ ಘಟನೆ ನಡೆದಿದೆ. ಪಟ್ಟಣದಲ್ಲಿರುವ ಗೋಶಾಲೆಯಲ್ಲಿ 10-20 ಬೀದಿ ಹಸುಗಳು ಇದರ ಜೊತೆಗೆ ಅಪಘಾತದಲ್ಲಿ ಕಾಲು ಮುರಿದುಕೊಂಡ ಹಸು, ಕರುಗಳನ್ನು ಬಿಡಾಡಿ ದನಗಳನ್ನು ಸಾಕುತ್ತಿದ್ದರು‌. ಭಾನುವಾರ ರಾತ್ರಿ 12 ಗಂಟೆಯವರೆಗೆ ಗೋ ಶಾಲೆಯ ಗೋ ಸೇವಕರು ದನ-ಕರುಗಳಿಗೆ ಆಹಾರ ಹಾಕಿ ಮನೆಗೆ ಹೋದ ಸಂದರ್ಭದಲ್ಲಿ ಕಿಡಿಗೇಡಿಗಳು…

Read More