Headlines

ಕೆಂಚನಾಲದಲ್ಲಿ ಸಡಗರ ಸಂಭ್ರಮದಿಂದ 78ನೇ ಸ್ವಾತಂತ್ರ್ಯೋತ್ಸವ ಆಚರಣೆ – ಸಾಧಕರಿಗೆ ಸನ್ಮಾನ

ಕೆಂಚನಾಲದಲ್ಲಿ ಸಡಗರ ಸಂಭ್ರಮದಿಂದ 78ನೇ ಸ್ವಾತಂತ್ರ್ಯೋತ್ಸವ ಆಚರಣೆ – ಸಾಧಕರಿಗೆ ಸನ್ಮಾನ ಕೆಂಚನಾಲದಲ್ಲಿ ಸಡಗರ ಹಾಗೂ ಸಂಭ್ರಮದಿಂದ 78ನೇಯ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ಧ್ವಜಾರೋಹಣ ನೆರವೇರಿಸಿ ಮಾತನಾಡಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹಿರಿಯರು ತನು, ಮನ, ಧನವನ್ನು ಲೆಕ್ಕಿಸದೇ ತ್ಯಾಗ ಮಾಡಿ ಹುತಾತ್ಮರಾಗಿದ್ದು ಅವರಂತೆ ಪ್ರತಿಯೊಬ್ಬರೂ ಸ್ವಾತಂತ್ರ್ಯ ಪ್ರೇಮಿಯಾಗಿ ದೇಶಾಭಿಮಾನ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು. ಇದೇ ಸಂಧರ್ಭದಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಸಲಾಯಿತು. ಪ್ರಕಾಶ್ ಮಾದಾಪುರ , ಅಲ್ತಾಫ್…

Read More

ಚಿಕ್ಕಜೇನಿ ಪ್ರೌಢ ಶಾಲೆಯಲ್ಲಿ ಕೇಂದ್ರ ಸಂವಹನ ಇಲಾಖೆಯಿಂದ ಸ್ವಾತಂತ್ರ್ಯ ಉತ್ಸವ

ಚಿಕ್ಕಜೇನಿ ಪ್ರೌಢ ಶಾಲೆಯಲ್ಲಿ ಕೇಂದ್ರ ಸಂವಹನ ಇಲಾಖೆಯಿಂದ ಸ್ವಾತಂತ್ರ್ಯ ಉತ್ಸವ ರಿಪ್ಪನ್‌ಪೇಟೆ – ಇಲ್ಲಿಗೆ ಸಮೀಪದ ಚಿಕ್ಕಜೇನಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಗುರುವಾರ ಶಿವಮೊಗ್ಗದ ಕೇಂದ್ರ ಸಂವಹನ ಇಲಾಖೆಯಿಂದ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಎಸ್.ಡಿ.ಎಂ.ಸಿ.ಅಧ್ಯಕ್ಷ ಪ್ರಕಾಶ್ ರಾಷ್ಟ್ರ ಧ್ವಜಾರೋಹಣ ನಡೆಸಿದರು. ಗ್ರಾ.ಪಂ.ಸದಸ್ಯ ಅಣ್ಣಪ್ಪ ಶೆಟ್ಟಿ ಸ್ವಾತಂತ್ರ್ಯ ಜಾಥಾಕ್ಕೆ ಚಾಲನೆ ನೀಡಿದರು. ಚಿಕ್ಕಜೇನಿ ಗ್ರಾ.ಪಂ. ಅಧ್ಯಕ್ಷ ರಾಜು ಎನ್.ಪಿ.ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಮಕ್ಕಳು ದೇಶದ ಭವ್ಯ ಇತಿಹಾಸ ತಿಳಿದುಕೊಳ್ಳಬೇಕು ಎಂದರು.ಶಾಲೆಯ ಸಮಗ್ರ ಪ್ರಗತಿಗೆ ಗ್ರಾ. ಪಂ.ಸದಾ ಸಿದ್ಧವಿದೆ…

Read More

ರಿಪ್ಪನ್ ಪೇಟೆ ಪಟ್ಟಣದಲ್ಲಿ  ಸಡಗರ ಸಂಭ್ರಮದಿಂದ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

ರಿಪ್ಪನ್ ಪೇಟೆ ಪಟ್ಟಣದಲ್ಲಿ  ಸಡಗರ ಸಂಭ್ರಮದಿಂದ 78ನೇ ಸ್ವಾತಂತ್ರ್ಯೋತ್ಸವ ಆಚರಣೆ ರಿಪ್ಪನ್‌ಪೇಟೆ: ಪಟ್ಟಣದ ವಿವಿಧೆಡೆಗಳಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು  ಇಂದು ಸ್ವಾತಂತ್ರ್ಯ ದಿನಾಚರಣೆಯನ್ನು ಸಡಗರ ಸಂಭ್ರಮದಿಂದ ಆಚರಿಸಿದರು. ಪಟ್ಟಣದ ಗ್ರಾಮ ಪಂಚಾಯತಿ, ನಾಡಕಛೇರಿ, ಪೊಲೀಸ್‌ ಠಾಣೆ, ಪ್ರಾಥಮಿಕ ಆರೋಗ್ಯ ಕೇಂದ್ರ, ರೈತಸಂಪರ್ಕ ಕೇಂದ್ರ, ಸರ್ಕಾರಿ ಬಿಸಿಎಂ ವಸತಿ ನಿಲಯ, ಪ್ರಥಮದರ್ಜೆ, ಪದವಿಪೂರ್ವ ಕಾಲೇಜು, ಪ್ರೌಢಶಾಲೆ, ಸರ್ಕಾರಿ ಮತ್ತು ಖಾಸಗಿ ಪ್ರಾಥಮಿಕ ಹಿರಿಯ, ಕಿರಿಯ ಶಾಲೆ, ಮೆಸ್ಕಾಂ, ಪಶುವೈದ್ಯಕೀಯ ಆಸ್ಪತ್ರೆ,  ಬ್ಯಾಂಕ್‌ಗಳು, ಅರಣ್ಯ ಇಲಾಖೆ, ಮೊಹಿಯುದ್ದೀನ್ ಜುಮ್ಮಾ ಮಸೀದಿ,ಗುಡ್…

Read More

ಬೈಕ್ ಹಾಗೂ ಕಾರಿನ ನಡುವೆ ಡಿಕ್ಕಿ – ಬೈಕ್ ಸವಾರನಿಗೆ ಗಂಭೀರ ಪೆಟ್ಟು

ಬೈಕ್ ಹಾಗೂ ಕಾರಿನ ನಡುವೆ ಡಿಕ್ಕಿ – ಬೈಕ್ ಸವಾರನಿಗೆ ಗಂಭೀರ ಪೆಟ್ಟು ರಿಪ್ಪನ್‌ಪೇಟೆ : ಬೈಕ್ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿರುವ ಘಟನೆ ಸಾಗರ ರಸ್ತೆ ಪುನೀತ್ ರಾಜ್‍ಕುಮಾರ್ ಸರ್ಕಲ್ ಬಳಿಯಲ್ಲಿ ಇಂದು ಸಂಜೆ ನಡೆದಿದೆ. ಚಂದಳ್ಳಿ ಗ್ರಾಮದ ಶಶಿಕಾಂತ್ ಎಂಬ ಯುವಕನಿಗೆ ಗಂಭೀರ ಗಾಯಗಳಾಗಿದ್ದು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ರವಾನಿಸಲಾಗಿದೆ. ಆನಂದಪುರ ಕಡೆಯಿಂದ ಬರುತಿದ್ದ ಮಾರುತಿ ವ್ಯಾಗನರ್ ಕಾರು…

Read More

ಕುಡುಕರ ನೆಚ್ಚಿನ ತಾಣವಾದ ಬಸ್‌ ನಿಲ್ದಾಣ! – ಪ್ರಯಾಣಿಕರ ಗೋಳು ಕೇಳುವವರ್ಯಾರು.!?

ಕುಡುಕರ ನೆಚ್ಚಿನ ತಾಣವಾದ ಬಸ್‌ ನಿಲ್ದಾಣ! – ಪ್ರಯಾಣಿಕರ ಗೋಳು ಕೇಳುವವರ್ಯಾರು.!? ರಿಪ್ಪನ್‌ಪೇಟೆ : ಇಲ್ಲಿನ ವಿನಾಯಕ ವೃತ್ತದಲ್ಲಿರುವ ಬಸ್ ನಿಲ್ದಾಣ ಪ್ರಯಾಣಿಕರ ಅನುಕೂಲಕ್ಕೆ ಬಾರದೇ ಪುಂಡ ಕುಡುಕರ ತಾಣವಾಗಿ ಮಾರ್ಪಟ್ಟು ಮಹಿಳೆಯರು , ವೃದ್ದರು ಹಾಗೂ ಶಾಲಾ ಕಾಲೇಜು ಮಕ್ಕಳು ಪರದಾಡುವಂತಾಗಿದೆ. ಹೌದು ಮಲೆನಾಡಿನ ಅನೇಕ ಧಾರ್ಮಿಕ ಕ್ಷೇತ್ರ ಹಾಗೂ ಪ್ರವಾಸಿ ತಾಣಗಳಿಗೆ ಸಂಪರ್ಕ ಕೊಂಡಿಯಾಗಿರುವ ರಿಪ್ಪನ್‌ಪೇಟೆ ಪಟ್ಟಣದಲ್ಲಿ ಬಸ್ ನಿಲ್ದಾಣವಿಲ್ಲದೇ ಪ್ರಯಾಣಿಕರು ಪರದಾಡುತ್ತಿರುವು ಹಲವು ದಶಕಗಳ ಗೋಳಾಗಿದೆ.ಇನ್ನೂ ತೀರ್ಥಹಳ್ಳಿ ರಸ್ತೆ ಹಾಗೂ ಹೊಸನಗರ ರಸ್ತೆಯ…

Read More

Ripponpete | ಕಾಂಗ್ರೆಸ್ ಜಿಲ್ಲಾ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಲೇಖನ ದಿಡೀರ್ ರಾಜಿನಾಮೆ…!!?

ರಿಪ್ಪನ್‌ಪೇಟೆ : ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಲೇಖನಾ ಇಂದು ಹುದ್ದೆಗೆ ದಿಡೀರ್ ರಾಜಿನಾಮೆ ನೀಡಿದ್ದಾರೆ. ಪಟ್ಟಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಇತ್ತೀಚಿನ ಕಾಂಗ್ರೆಸ್ ಪಕ್ಷದ ಸ್ಥಳೀಯ ನಾಯಕರುಗಳ ನಡೆಯಿಂದ ಬೇಸತ್ತು ಜಿಲ್ಲಾ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಹಾಗೂ ಸರ್ಕಾರಿ ಪದವಿ‌ಪೂರ್ವ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ ಅವರು ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ನಿಷ್ಟಾವಂತ ಸಕ್ರಿಯ ಕಾರ್ಯಕರ್ತೆಯಾಗಿ…

Read More