Headlines

SHIVAMOGGA | ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಹಿನ್ನಲೆಯಲ್ಲಿ ವಾಹನ ಸಂಚಾರ ಮಾರ್ಗ ಬದಲಾವಣೆ

ಶಿವಮೊಗ್ಗ ನಗರದ ಹಿಂದೂ ಮಹಾಸಭಾ ಗಣಪತಿಯನ್ನು ಸೆ.17 ರಂದು ವಿಸರ್ಜನೆ ಮಾಡುವುದರಿಂದ ಮೆರವಣಿಗೆ ಸಂದರ್ಭದಲ್ಲಿ ಸಂಚಾರ ಸುಗಮಗೊಳಿಸುವ ಸಲುವಾಗಿ ಈ ಕೆಳಕಂಡಂತೆ ವಾಹನ ಸಂಚಾರ ನಿಷೇಧ, ನಿಲುಗಡೆ ಹಾಗೂ ವಾಹನಗಳ ಮಾರ್ಗ ಬದಲಾವಣೆ ಮಾಡಲು ತಾತ್ಕಾಲಿಕ ಅಧಿಸೂಚನೆಯನ್ನು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೊರಡಿಸಿದ್ದಾರೆ. ಸೆ.17 ರಂದು ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆಯು ಭೀಮೇಶ್ವರ ದೇವಸ್ಥಾನದಿಂದ ಪ್ರಾರಂಭವಾಗಿ ಎಸ್.ಪಿ.ಎಂ ಮುಖ್ಯ ರಸ್ತೆ, ರಾಮಣ್ಣ ಶ್ರೇಷ್ಠಿ ಪಾರ್ಕ್, ಗಾಂಧಿ ಬಜಾರ್ ಮುಖ್ಯ ರಸ್ತೆ, ಎಸ್.ಎನ್ ಸರ್ಕಲ್, ಬಿ.ಹೆಚ್ ರಸ್ತೆ,…

Read More

ವ್ಯಕ್ತಿಯನ್ನು ಬೆದರಿಸಿ ಲಕ್ಷಾಂತರ ರೂ ದರೋಡೆ – ಆರೋಪಿಗಳನ್ನು ಮಾಲು ಸಮೇತ ಬಂಧಿಸಿದ ಪೊಲೀಸರು

ವ್ಯಕ್ತಿಯನ್ನು ಬೆದರಿಸಿ ಲಕ್ಷಾಂತರ ರೂ ದರೋಡೆ – ಆರೋಪಿಗಳನ್ನು ಮಾಲು ಸಮೇತ ಬಂಧಿಸಿದ ಪೊಲೀಸರು ಬೈಕ್ ನಲ್ಲಿ ಬಂದು ವ್ಯಕ್ತಿಯೊಬ್ಬರನ್ನು ಬೆದರಿಸಿ ದರೋಡೆ ಮಾಡಿದ್ದ ಪ್ರಕರಣವನ್ನು ಭದ್ರಾವತಿ ನ್ಯೂಟೌನ್ ಪೊಲೀಸರು ಭೇದಿಸಿದ್ದು,  ಇಬ್ಬರು ಆರೋಪಿಗಳನ್ನ ಬಂಧಿಸಿ, 1.5 ಲಕ್ಷ ರೂ.ಗಳ ಚಿನ್ನಾಭರಣವನ್ನ ವಶಕ್ಕೆ ಪಡೆದಿದ್ದಾರೆ. ಘಟನೆಯ ಹಿನ್ನಲೆ : ಆ.09 ರಂದು ಶಾರದಾ ಮಂದಿರದ ಬಳಿ ನಿಂತಿದ್ದ  ಮುರುಳಿಧರ್ (64) ಎಂಬುವರಿಗೆ ಬೈಕ್ ನಲ್ಲಿ ಬಂದಿದ್ದ 4-5 ಜನ ಹುಡುಗರು  ಹೆದರಿಸಿ ಅವರ ಬಳಿ ಇದ್ದ ಉಂಗುರ,…

Read More

ಸಾರ್ವಜನಿಕ ಹಬ್ಬಗಳ ಹಿನ್ನಲೆ ರೌಡಿಗಳ ಪರೇಡ್ | 110 ರೌಡಿಗಳಿಗೆ ಎಸ್ ಪಿ ವಾರ್ನಿಂಗ್

ಸಾರ್ವಜನಿಕ ಹಬ್ಬಗಳ ಹಿನ್ನಲೆ ರೌಡಿಗಳ ಪರೇಡ್ | 110 ರೌಡಿಗಳಿಗೆ ಎಸ್ ಪಿ ವಾರ್ನಿಂಗ್ ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಶಿವಮೊಗ್ಗ ಪೊಲೀಸರು ರೌಡಿಗಳ ಪರೇಡ್‌ ನಡೆಸಿ ಖಡಕ್ ವಾರ್ನಿಂಗ್ ನೀಡಿದ್ದಾರೆ. ಕಾನೂನು ಸುವ್ಯವಸ್ಥೆ ವಿಚಾರದಲ್ಲಿ ಮುಂಜಾಗ್ರತಾ ಕ್ರಮವಾಗಿ ದಿನಾಂಕಃ 09-08-2024 ರಂದು ಸಂಜೆ ಶಿವಮೊಗ್ಗ ನಗರದ  ಡಿಎಆರ್ ಸಭಾಂಗಣದ ಆವರಣದಲ್ಲಿ ಒಟ್ಟು 110 ಜನ ರೌಡಿಗಳನ್ನ ಪರೆಡ್‌ಗೆ ಪೊಲೀಸರು ಹಾಜರುಪಡಿಸಿದ್ದರು. ಈ ವೇಳೆ ಅವರುಗಳ ವೈಯಕ್ತಿಕ ವಿವರ ಜೊತೆಗೆ ಆದಾಯದ ಮೂಲಗಳನ್ನು…

Read More
Exit mobile version