Headlines

HOSANAGARA | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮಾಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ಮುಷ್ಕರ

ಹೊಸನಗರ : ಇತ್ತೀಚೆಗೆ ಚಿತ್ರದುರ್ಗದಲ್ಲಿ ನಡೆದ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಕಾರ್ಯಕಾರಣಿ ಸಭೆಯ ನಿರ್ಣಯದಂತೆ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಲೇಖನಿ ಕೆಳಗಿಟ್ಟು, ಮೊಬೈಲ್ ಆಪ್ ಮತ್ತು ವೆಬ್ ಕಾರ್ಯ ಸ್ಥಗಿತಗೊಳಿಸಿ ಗುರುವಾರ ಇಲ್ಲಿನ ತಾಲೂಕು ಕಚೇರಿ ಎದುರು ಕೈಗೆ ಕಪ್ಪು ಪಟ್ಟಿ ಧರಿಸಿ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮುಂದಾದ ಘಟನೆ ನಡೆದಿದೆ. ಈ ಸಂಧರ್ಭದಲ್ಲಿ ಗ್ರಾಮ ಆಡಳಿತ ಅಧಿಕಾರಿ ಸಂಘದ ಹೊಸನಗರ ತಾಲೂಕು ಅಧ್ಯಕ್ಷ ನವೀನ್ ಕುಮಾರ್ ಮಾತನಾಡಿ, ಕಂದಾಯ…

Read More

RIPPONPETE | ಈದ್ ಮಿಲಾದ್ ಕಾರ್ಯಕ್ರಮಕ್ಕೆ ಸಕಲ ಸಿದ್ದತೆ | ಗುರುವಾರ ಸೌಹಾರ್ದ ಸಮ್ಮಿಲನ ಕಾರ್ಯಕ್ರಮ , ಶಾಸಕರುಗಳಿಗೆ ಸನ್ಮಾನ

RIPPONPETE | ಈದ್ ಮಿಲಾದ್ ಕಾರ್ಯಕ್ರಮಕ್ಕೆ ಸಕಲ ಸಿದ್ದತೆ | ಗುರುವಾರ ಸೌಹಾರ್ದ ಸಮ್ಮಿಲನ ಕಾರ್ಯಕ್ರಮ , ಶಾಸಕರುಗಳಿಗೆ ಸನ್ಮಾನ ರಿಪ್ಪನ್‌ಪೇಟೆ : ಈದ್ ಮಿಲಾದ್ ಹಬ್ಬದ ಅಂಗವಾಗಿ ಗುರುವಾರ ಸೌಹಾರ್ದ ಸಮಾವೇಶ ಹಾಗೂ ಶಾಸಕರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾದ ನಾಸೀರ್ ಹಮೀದ್ ಸಾಬ್ ಪತ್ರೀಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಗುರುವಾರ ಮೊಹಿಯುದ್ದೀನ್ ಜುಮ್ಮಾ ಮಸೀದಿ,ಮೆಕ್ಕಾ ಮಸೀದಿ ,ಈದ್ ಮಿಲಾದ್ ಸಮಿತಿ ,ತಾಅಜಿಜುಲ್ ಅರಬ್ಬಿಕ್ ಮದರಸ ,ಬದ್ರಿಯಾ ಮದರಸ ಗವಟೂರು ,SYS…

Read More

ಕಾಡಾನೆ ದಾಳಿಗೆ ಬೆಳೆ ನಾಶ – ರೈತರ ಆಕ್ರೋಶ

ಕಾಡಾನೆ ದಾಳಿಗೆ ಬೆಳೆ ನಾಶ – ರೈತರ ಆಕ್ರೋಶ ಮಲೆನಾಡಿನಲ್ಲಿ ಕಾಡಾನೆಗಳ ಹಾವಳಿ ಮುಂದುವರೆದಿದ್ದು ಭಾನುವಾರ (ಸೆ. 22) ತಡರಾತ್ರಿ ಎರಡು ಕಾಡಾನೆಗಳು ದಾಳಿ ನಡೆಸಿ ರೈತರ ಬೆಳೆಗಳನ್ನು ಸಂಪೂರ್ಣ ನಾಶ ಮಾಡಿರುವ ಘಟನೆ ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ನಡೆದಿದೆ. ಪುರದಾಳು ಗ್ರಾಮದ ರಾಜೇಶ್ ಹಾಗೂ ಬೀರಪ್ಪ, ನಾಗರಾಜ್ ಎಂಬುವರ ತೋಟ -ಹೊಲಗಳಿಗೆ ಭಾನುವಾರ (ಸೆ.22) ರಾತ್ರಿ ಎರಡು ಕಾಡಾನೆಗಳು ದಾಳಿ ಮಾಡಿ ಅಡಿಕೆ ಹಾಗೂ ತೆಂಗಿನ ಮರಗಳನ್ನು ಬುಡಮೇಲು ಮಾಡಿದ್ದು ಜೊತೆಗೆ ಜೋಳ ಹಾಗೂ…

Read More

ವೈದ್ಯಕೀಯ ವಿಭಾಗದಲ್ಲಿ ಚಿನ್ನದ ಪದಕ ಭೇಟೆಯಾಡಿದ ಹೊಸನಗರದ ಯುವಕ

ವೈದ್ಯಕೀಯ ವಿಭಾಗದಲ್ಲಿ ಚಿನ್ನದ ಪದಕ ಭೇಟೆಯಾಡಿದ ಹೊಸನಗರದ ಯುವಕ ಹೊಸನಗರ : ತಾಲೂಕಿನ ಕಾರಣಗಿರಿಯ ಯುವಕನೊಬ್ಬ ವೈದ್ಯಕೀಯ  ವಿಭಾಗದಲ್ಲಿ ಚಿನ್ನದ ಪದಕ ಗಳಿಸುವ ಮೂಲಕ ಅದ್ವಿತೀಯ ಸಾಧನೆಗೈದಿದ್ದಾನೆ. ತಾಲ್ಲೂಕಿನ ಕಾರಣಗಿರಿ ಗ್ರಾಮದ ವರ್ತಕ ಜಯರಾಮ್ ಮತ್ತು ರತ್ನ ದಂಪತಿಗಳ ಪುತ್ರ ಜೆ. ಸುಮನ್ ಸಾಧನೆಗೈದ ಯುವಕನಾಗಿದ್ದಾನೆ. ಬೆಂಗಳೂರಿನ ಸರ್ಕಾರಿ ದಂತ ವೈದ್ಯಕೀಯ ಕಾಲೇಜು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವ್ಯಾಸಂಗ ಮಾಡುತ್ತಿರುವ ಹೊಸನಗರ ತಾಲ್ಲೂಕಿನ ಜೆ. ಸುಮನ್ ಅವರು ಅಂತಿಮ ವರ್ಷದ ಆರು ಪರೀಕ್ಷೆಗಳಲ್ಲಿ ಆರರಲ್ಲೂ ಉತ್ತಮ ಫಲಿತಾಂಶ ದಾಖಲಿಸಿ…

Read More

ಅರಣ್ಯಾಧಿಕಾರಿಗಳ ವಿರುದ್ದ ಭುಗಿಲೆದ್ದ ಭಾರಿ ಆಕ್ರೋಶ – ಶಾಸಕ ಬೇಳೂರು ಮಧ್ಯಸ್ತಿಕೆಯಿಂದ ಸಂಧಾನ

ಅರಣ್ಯಾಧಿಕಾರಿಗಳ ವಿರುದ್ದ ಭುಗಿಲೆದ್ದ ಭಾರಿ ಆಕ್ರೋಶ – ಶಾಸಕ ಬೇಳೂರು ಮಧ್ಯಸ್ತಿಕೆಯಿಂದ ಸಂಧಾನ ಅರಣ್ಯ ಇಲಾಖೆಯಿಂದ ಒತ್ತುವರಿ ತೆರವಿಗೆ ನೋಟಿಸ್ ನೀಡಿ ಕಿರುಕುಳ ನೀಡುವುದರೊಂದಿಗೆ ಅರಣ್ಯಾಧಿಕಾರಿಗಳು ಮುಳುಗಡೆ ಸಂತ್ರಸ್ಥರ ಮೇಲೆ ದಬ್ಬಾಳಿಕೆ ನಡೆಸುತಿದ್ದಾರೆ ಎಂದು ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬುಕ್ಕಿವರೆ ಗ್ರಾಮದಲ್ಲಿ ನಡೆದಿದೆ. ಬುಕ್ಕಿವರೆ ಗ್ರಾಮದ ಹೆಬ್ಬಳಿ ಶಾಲೆಯಲ್ಲಿ ನಡೆದ ಅರಣ್ಯ ಸಮಿತಿ ಸಭೆಯಲ್ಲಿ ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಬೇಳೂರು ಗೋಪಾಲಕೃಷ್ಣ ಸಮ್ಮುಖದಲ್ಲಿ…

Read More

ವಾಕ್ ಮಾಡುವಾಗ ತೀವ್ರ ಹೃದಯಾಘಾತ – 20 ವರ್ಷದ ವಿದ್ಯಾರ್ಥಿ ಸಾವು !

ವಾಕ್ ಮಾಡುವಾಗಲೇ ತೀವ್ರ ಹೃದಯಾಘಾತ – ವಿದ್ಯಾರ್ಥಿ ಸಾವು ! ಶಿವಮೊಗ್ಗ : ಹೆಲಿಪ್ಯಾಡ್’ನಲ್ಲಿ ವಾಕಿಂಗ್ ಮಾಡುವಾಗ ತೀವ್ರ ಹೃದಯಾಘಾತಕ್ಕೊಳಗಾಗಿ 20 ವರ್ಷದ ವೈದ್ಯಕೀಯ ವಿದ್ಯಾರ್ಥಿ ಮರಣ ಹೊಂದಿರುವ ಘಟನೆ ನಗರದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಸಿಮ್ಸ್ ಕಾಲೇಜಿನಲ್ಲಿ 2ನೇ ವರ್ಷದ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದ ಪೃಥ್ವಿ ಎಂದು ಗುರುತಿಸಲಾಗಿದೆ. ಈ ವಿದ್ಯಾರ್ಥಿ ಇಂದು ಸಂಜೆ 4 ಗಂಟೆ ವೇಳೆಗೆ ಹೆಲಿಪ್ಯಾಡ್’ನಲ್ಲಿ ವಾಕಿಂಗ್ ಮಾಡುತ್ತಿದ್ದರು. ಆ ವೇಳೆ ಏಕಾಏಕಿ ತೀವ್ರ ಹೃದಯಾಘಾತ ಸಂಭವಿಸಿದ್ದು, ಕುಸಿದು ಬಿದ್ದಿದ್ದಾರೆ. ಅಲ್ಲೆ…

Read More

ಪೊಲೀಸ್ ಸಿಬ್ಬಂದಿ ಹಾಲೇಶಪ್ಪ ರವರಿಗೆ ಒಲಿದ “ಪಂಡಿತ್ ಪುಟ್ಟರಾಜ್ ಸನ್ಮಾನ್” – 2024 ಪ್ರಶಸ್ತಿ

ಪೊಲೀಸ್ ಸಿಬ್ಬಂದಿ ಹಾಲೇಶಪ್ಪ ರವರಿಗೆ ಒಲಿದ “ಪಂಡಿತ್ ಪುಟ್ಟರಾಜ್ ಸನ್ಮಾನ್” – 2024 ಪ್ರಶಸ್ತಿ ಪೊಲೀಸ್ ಇಲಾಖೆಯಲ್ಲಿ ಮುಖ್ಯ ಪೇದೆಯಾಗಿ ಸೇವೆ ಸಲ್ಲಿಸುವ ಜೊತೆಗೆ ಸುಮಾರು 3 ಸಾವಿರ ಸಸಿ ನೆಟ್ಟು ಪೋಷಿಸಿ ಹಸಿರು ಸೇನಾನಿ ಎಂದೇ ಖ್ಯಾತರಾಗಿ, 40 ಬಾರಿ ಸ್ವಯಂ ರಕ್ತದಾನ ಮಾಡುವ ಮೂಲಕ ರಕ್ತದಾನದ ಮಹತ್ವ ಸಾರಿ, ಜಿಲ್ಲೆಯ ವಿವಿಧೆಡೆ ರಕ್ತದಾನ ಶಿಬಿರಗಳನ್ನು ಆಯೋಜಿಸುವ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಕೊಂಡಿರುವ ಭದ್ರಾವತಿ ಸಂಚಾರಿ ಠಾಣೆಯಲ್ಲಿ ಕರ್ತವ್ಯ ನಿರತ ಮುಖ್ಯ ಪೇದೆ ಹಾಲೇಶಪ್ಪ ಅವರ…

Read More

ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿ ಮೇಲೆ ದಾಳಿ – ಓರ್ವ ವಶಕ್ಕೆ

ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿ ಮೇಲೆ ದಾಳಿ – ಅಕ್ರಮ ಮದ್ಯ ವಶಕ್ಕೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಮರಸ ಗ್ರಾಮದಲ್ಲಿ ಅಂಗಡಿಯೊಂದರಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಮಾಹಿತಿ ಆಧರಿಸಿ, ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ, ಮದ್ಯವನ್ನು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಅಬಕಾರಿ ಅಧಿಕಾರಿಗಳು ಭರ್ಜರಿ ಬೇಟೆಯಾಡಿದ್ದಾರೆ.ಮರಸ ಗ್ರಾಮದ ಅಂಗಡಿಯೊಂದರಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಂತ ಮಾಹಿತಿ ಆಧರಿಸಿ ಅಬಕಾರಿ ಇನ್ಸ್ ಪೆಕ್ಟರ್ ಸಂದೀಪ್ ಕುಮಾರ್ ನೇತೃತ್ವದಲ್ಲಿ ದಾಳಿಯನ್ನು ನಡೆಸಲಾಗಿದೆ….

Read More

ಹೊಸನಗರದಲ್ಲಿ ಅದ್ದೂರಿಯಾಗಿ ಜರುಗಿದ ಈದ್ ಮಿಲಾದ್ ಮೆರವಣಿಗೆ

ಹೊಸನಗರದಲ್ಲಿ ಅದ್ದೂರಿಯಾಗಿ ಜರುಗಿದ ಈದ್ ಮಿಲಾದ್ ಮೆರವಣಿಗೆ ಹೊಸನಗರ : ಪಟ್ಟಣದಲ್ಲಿ ಇಂದು ಮುಸ್ಲಿಂ ಬಾಂಧವರು ಜಗತ್ತಿಗೆ ಮಾನವತೆಯನ್ನು ಪಸರಿಸಿದ ವಿಶ್ವ ಪ್ರವಾದಿ ಮಹಮ್ಮದ್ ಮುಸ್ತಾಫಾ ರವರ ಜನ್ಮ ದಿನಾಚರಣೆಯನ್ನು ಸಡಗರ ಸಂಭ್ರಮದಿಂದ ಆಚರಿಸಿದರು. ಪ್ರಾರ್ಥನಾ ಮಂದಿರದಿಂದ ಹೊಸನಗರ ಬಸ್ ನಿಲ್ದಾಣ ವೃತ್ತದ ಮೂಲಕ ಪ್ರಮುಖ ಬೀದಿಗಳಲ್ಲಿ ಮುಸಲ್ಮಾನ ಭಾಂಧವರು ಯುವಕರ “ದಫ಼್’’ ಅಕರ್ಷಣೆಯೊಂದಿಗೆ  ಮುಸ್ಲಿಂ ಧರ್ಮಗುರುಗಳ ನೇತೃತ್ವದಲ್ಲಿ  ಮೆರವಣಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು.

Read More

ಪ್ರಜಾಪ್ರಭುತ್ವ ದಿನಾಚರಣೆ – ಬೃಹತ್ ಮಾನವ ಸರಪಳಿ ರಚನೆ ಯಶಸ್ವಿ

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಇಂದು ಬೆಳಿಗ್ಗೆ 9ರಿಂದ 10 ಗಂಟೆಯವರೆಗೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಬಾರಂದೂರಿನಿಂದ ಶಿವಮೊಗ್ಗ ತಾಲ್ಲೂಕಿನ ಗಡಿ ಗ್ರಾಮ ಮಡಿಕೆಚಿಲೂರುವರೆಗೆ ಮಾನವ ಸರಪಳಿ ರಚನೆ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು. ಈ ಬೃಹತ್ ಮಾನವ ಸರಪಳಿ ನಿರ್ಮಾಣದಲ್ಲಿ ಜಿಲ್ಲೆಯ ಶಾಲಾ ಕಾಲೇಜು ವಿದ್ಯಾರ್ಥಿಗಳು, ಸ್ಥಳೀಯ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಸ್ವಸಹಾಯ ಗುಂಪುಗಳ ಮಹಿಳಾ ಸದಸ್ಯರು, ನೌಕರರು ಹಾಗೂ ಸಾರ್ವಜನಿಕರು ಸಕ್ರಿಯವಾಗಿ ಭಾಗವಹಿಸಿದರು.ಜಿಲ್ಲಾಧಿಕಾರಿ ಗಳ ಕಚೇರಿ ಅವರಣದಲ್ಲಿ ಆಯೋಜಿಸಲಾಗಿದ್ದ ವೇದಿಕೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗಣ್ಯರು…

Read More