
ಸಿಎಂ ಸಿದ್ದರಾಮಯ್ಯ ಮನವೊಲಿಕೆಗೂ ಬಗ್ಗದ ಬಂಡಾಯ ಅಭ್ಯರ್ಥಿ; ಸಿದ್ದು ಭೇಟಿ ಬಳಿಕ ಉಲ್ಟಾ ಹೊಡೆದ ಖಾದ್ರಿ!
ಸಿಎಂ ಮನವೊಲಿಕೆಗೆ ಬಗ್ಗದ ಬಂಡಾಯ ಅಭ್ಯರ್ಥಿ; ಸಿದ್ದು ಭೇಟಿ ಬಳಿಕ ಉಲ್ಟಾ ಹೊಡೆದ ಖಾದ್ರಿ! ರಾಜ್ಯದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಅಖಾಡ ರಂಗೇರಿದೆ. ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ನಿನ್ನೆ ಪ್ರಮುಖ ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವುದರೊಂದಿಗೆ ಪ್ರಚಾರ ಆರಂಭಿಸಿವೆ. ಹಾವೇರಿ ಜಿಲ್ಲೆ ಶಿಗ್ಗಾಂವಿಯಲ್ಲಿ (Shiggaon) ಕಾಂಗ್ರೆಸ್ (Congress) ವಿರುದ್ಧ ಬಂಡೆದ್ದ ಅಜ್ಜಂಪೀರ್ ಖಾದ್ರಿ ಕೊನೆ ಗಳಿಗೆಯಲ್ಲಿ ನಿನ್ನೆ ನಾಮಪತ್ರ ಸಲ್ಲಿಸಿದ್ದರು. ಅವರನ್ನು ಮನವೊಲಿಸುವಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಯಶಸ್ವಿಯಾಗಿದ್ದಾರೆ ಎಂದು…